ಶಿವಮೊಗ್ಗ, ಸೆ.03: ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ ಮೆಸ್ಕಾಂ (MESCOM) ಇಲಾಖೆಯ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ದುರಸ್ತಿ ಹಾಗೂ ನಿರ್ವಹಣೆ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 06 ರಂದು ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಪೂರೈಕೆ ಸಂಪೂರ್ಣ ಸ್ಥಗಿತಗೊಳ್ಳಲಿದೆ.
ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳುತ್ತಿರುವ ಕಾರಣ ಸೆಪ್ಟೆಂಬರ್ 06 ಮತ್ತು ಸೆಪ್ಟೆಂಬರ್ 07 ರಂದು ಶಿವಮೊಗ್ಗ ನಗರಾದ್ಯಂತ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಜಲಮಂಡಳಿ ತಿಳಿಸಿದೆ.
ಸಾರ್ವಜನಿಕರಲ್ಲಿ ಸಹಕಾರಕ್ಕೆ ಮನವಿ: ಎರಡು ದಿನಗಳ ಕಾಲ ನೀರು ಸರಬರಾಜು ಬಾಧಿತವಾಗಲಿರುವುದರಿಂದ ಶಿವಮೊಗ್ಗ ನಗರದ ಸಾರ್ವಜನಿಕರು ಹಾಗೂ ಗ್ರಾಹಕರು ಮುನ್ನೆಚ್ಚರಿಕೆ ವಹಿಸಿ, ತಮ್ಮ ದಿನನಿತ್ಯದ ಅಗತ್ಯಕ್ಕೆ ತಕ್ಕಷ್ಟು ಕುಡಿಯುವ ನೀರನ್ನು ಶೇಖರಿಸಿಟ್ಟುಕೊಳ್ಳಬೇಕು ಹಾಗೂ ಮಂಡಳಿಯೊಂದಿಗೆ ಸಹಕರಿಸಬೇಕು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (KUWS&DB) ಉಪ-ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.



More Stories
ಪ್ಲೇಟ್ಲೆಟ್ಸ್ ದಾನ ಮಾಡಿ ಜೀವ ಉಳಿಸಿದ ಶಿವಮೊಗ್ಗ ಸೈಬರ್ ಪೊಲೀಸ್ ಅರವಿಂದ್: ಜಿಲ್ಲಾ ಪೊಲೀಸ್ ಇಲಾಖೆಯಿಂದ ಮೆಚ್ಚುಗೆ
ಸೂಡಾ ನೂತನ ಸದಸ್ಯ ಶಶಾಂಕ್ ಸಜ್ಜನ್ಗೆ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದಿಂದ ಸನ್ಮಾನ
ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಕೆ.ಎಸ್. ಈಶ್ವರಪ್ಪ